Kundapra.com ಕುಂದಾಪ್ರ ಡಾಟ್ ಕಾಂ

ಮೊಳಹಳ್ಳಿ: ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಶೆಟ್ಟಿ ಬೆಳಗೋಡು ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮೊಳಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಶೆಟ್ಟಿ ಬೆಳಗೋಡು ಅನಾರೋಗ್ಯದಿಂದ ಸೋಮವಾರ ನಿಧನರಾದರು.

ಕ್ರೀಡಾ ಕಮೆಂಟರಿಗಳ ಮೂಲಕ ಪ್ರಸಿದ್ಧರಾಗಿದ್ದ ಪ್ರಕಾಶ್ ಶೆಟ್ಟಿ ಅವರು ವಾಲಿಬಾಲ್ ಆಟದ ಕಮೆಂಟರಿಗೆ ಕುಳಿತರೆಂದರೆ ಸ್ಟೇಡಿಯಂ ಸ್ಥಭ್ದವಾಗುತ್ತಿತ್ತು. ಅವರು ಹಲವಾರು ಕ್ರೀಡೋತ್ಸವಗಳನ್ನೂ ಸಂಘಟಿಸಿ ಯಶಸ್ವಿಯಾಗಿದ್ದರು. ಸ್ವತಃ ಕಲಾವಿದರಾಗಿದ್ದ ಪ್ರಕಾಶ್ ಶೆಟ್ಟಿ ಹಲವಾರು ಸಂಗೀತ ಕಾರ್ಯಕ್ರಮಗಳನ್ನೂ, ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಿ ಏಕಪಾತ್ರಾಭಿನಯದ ಮೂಲಕ ಪ್ರಸಿದ್ಧರಾಗಿದ್ದರು.

Exit mobile version