Kundapra.com ಕುಂದಾಪ್ರ ಡಾಟ್ ಕಾಂ

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಸೋಮವಾರ ಚಾಲನೆ ದೊರೆಯಿತು.

ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನೀಡಿದರು. ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಸತ್ಯ ಪ್ರಸನ್ನ, ದೊಟ್ಟಯ್ಯ ಪೂಜಾರಿ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ, ಸ್ಥಳೀಯರಾದ ನಾಗರಾಜ ಗಾಣಿಗ ಬಂಕೇಶ್ವರ, ರವೀಂದ್ರ ಶ್ಯಾನುಭೋಗ್ ಹಾಗೂ ಭಕ್ತಾದಿಗಳು ಹಾಜರಿದ್ದರು.

Exit mobile version