Kundapra.com ಕುಂದಾಪ್ರ ಡಾಟ್ ಕಾಂ

ಪ್ರತಿಭಾ ಕಾರಂಜಿಯಲ್ಲಿ ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2022-23ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಜನಪದ ನೃತ್ಯ ಮತ್ತು ಕವ್ಹಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಅಭೀಜ್ಞಾ – ಜನಪದ ಗೀತೆ, ದ್ವಿತೀಯ ಸ್ಥಾನ; ಆರ್ಯ ಅಯ್ಯಪ್ಪ ಹಾಲಂಬಿ ಮತ್ತು ಮಯೂರ್ ಜಿ – ರಸಪ್ರಶ್ನೆ, ದ್ವಿತೀಯ ಸ್ಥಾನ ಹಾಗೂ ಪ್ರಾಥಮಿಕ ಕಿರಿಯರ ವಿಭಾಗದಲ್ಲಿ ಸಿಂಧೂ ಮಧ್ಯಸ್ಥ – ಭಕ್ತಿಗೀತೆ, ದ್ವಿತೀಯ ಸ್ಥಾನ ಮತ್ತು ಆಶ್ರಿತ್ – ಇಂಗ್ಲಿಷ್ ಕಂಠಪಾಠ ಮೂರನೇ ಸ್ಥಾನ ಪಡೆದಿರುತ್ತಾರೆ. ಇವರಿಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Exit mobile version