Kundapra.com ಕುಂದಾಪ್ರ ಡಾಟ್ ಕಾಂ

ಸೈನ್ ಇನ್ ಸೆಕ್ಯುರಿಟಿಗೆ ಪೊಲೀಸ್ ಪ್ರಶಂಸನಾ ಪತ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಯತ್ನ ಮತ್ತು ಗಂಗೊಳ್ಳಿಯಲ್ಲಿ ಹಾಕಿರುವ ಬ್ಯಾನರ್ ಹರಿದ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಕೋಟೇಶ್ವರದ ಅಂಕದಕಟ್ಟೆಯ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯು ಅಳವಡಿಸಿದ ಸಿಸಿ ಟಿವಿ ಕ್ಯಾಮರದ ಪುಟೇಜ್‌ಗಳು ಸಹಕಾರಿಯಾಗಿವೆ.

ಸಂಸ್ಥೆಯ ಈ ಕಾರ‍್ಯದಿಂದ ಪೊಲೀಸ್ ಇಲಾಖೆ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ಇವರಿಗೆ ಕುಂದಾಪುರ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ ಇವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

Exit mobile version