Kundapra.com ಕುಂದಾಪ್ರ ಡಾಟ್ ಕಾಂ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಶಿಕ್ಷಕರು, ಪೋಷಕರು ಭಾಗವಹಿಸಲು ಸೂಚಿಸಿದ್ದ ಬಿಇಓ ಅಮಾನತು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
,ನ.9: ನವೆಂಬರ್ 7ರಂದು ಹೊಸಾಡು ಗ್ರಾಮದಲ್ಲಿ ನಡೆದ ಮಖ್ಯಮಂತ್ರಿಗಳ ಸರ್ಕಾರಿ ಕಾರ್ಯಕ್ರಮಕ್ಕೆ ಬೈಂದೂರು ವಲಯದ ಶಿಕ್ಷಕರು, ಪೋಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸುವಂತೆ ಸೂಚಿಸಿದ್ದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ. ಜಿ. ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಈ ಆದೇಶ ಹೊರಡಿಸಿದ್ದಾರೆ. ಶಿಕ್ಷಕರು / ಶಾಲಾ ಪೋಷಕರು / ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಹಾಜರಾಗಲು / ಭಾಗವಹಿಸಲು ಅವರು ಪತ್ರಮುಖೇನ ಸೂಚಿಸಿದ್ದರು. ಹೀಗೆ ಕಾರ್ಯಕ್ರಮಕ್ಕೆ ಭಾಗವಹಿಸಲು ಸೂಚಿಸಿರುವುದುಕುರಿತಂತೆ ಸದರಿಯವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಈ ಕೂಡಲೇ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ಅಧಿನಿಯಮದಡಿಯಲ್ಲಿ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಲಾಗಿದೆ. ಸದ್ಯ ಮಂಗಳೂರು ಡಯಟ್‌ನಲ್ಲಿ ಖಾಲಿ ಇರುವ ಹಿರಿಯ ಉಪನ್ಯಾಸಕರ ಹುದ್ದೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

Exit mobile version