Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರಗೋಷ್ಠಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು.

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಎಸ್. ಮಣಿಕಂಠ ದೇವಾಡಿಗ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ನೆಲ, ಜಲ, ಸಂಸ್ಕೃತಿ, ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು. ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ರಕ್ಷಿತಾ, ವರ್ಷಾ ರವಿಶಂಕರ್, ಧನ್ಯ, ಭೂಷಣ್, ಶಿಪಾಲಿ, ದರ್ಶನ್ ಹಾಗೂ ವಿಘ್ನೇಶ್ ವಿಚಾರಗೋಷ್ಠಿಯಲ್ಲಿ ವಿಚಾರವನ್ನು ಮಂಡಿಸಿದರು.

ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಅವರು ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿಗಳಾದ ಕೌಶಲ್ ಕಾರ್ಯಕ್ರಮ ನಿರೂಪಿಸಿ, ಶ್ರೀನಿಧಿ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Exit mobile version