Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ: ‘ಜನತಾ ಚಿತ್ರಸಿರಿ 2022’ ವಿದ್ಯಾರ್ಥಿ ಸ್ವ-ರಚಿತ ಚಿತ್ರಕಲಾ ಪ್ರದರ್ಶನ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ಚಿತ್ರಸಿರಿ – 2022’ ವಿದ್ಯಾರ್ಥಿ ಸ್ವ ರಚಿತ ಚಿತ್ರಕಲಾ ಪ್ರದರ್ಶನ ಇತ್ತಿಚಿಗೆ ಜರುಗಿತು.

ಮುದೂರು ಭಾರತ ಮಾತಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಚಂದ್ರಶೇಖರ್ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಮೆಚ್ಚಿಕೊಂಡು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಒದಗಿಸುತ್ತಿರುವ ಕಾಲೇಜಿನ ಕಾಯಕ ಶ್ಞಾಘನೀಯ ಎನ್ನುತ್ತಾ ಅವಕಾಶಗಳನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಂಜನಾ ಪ್ರಾರ್ಥಿಸಿ, ಸೃಜನ್ ಸ್ವಾಗತಿಸಿ,ಐಶ್ವರ್ಯ ಹಾಗೂ ಕ್ಷಮಾ ಕಾರ್ಯಕ್ರಮ ನಿರೂಪಿಸಿ, ಸುಶಾನ್ ವಂದಿಸಿದರು.

Exit mobile version