Kundapra.com ಕುಂದಾಪ್ರ ಡಾಟ್ ಕಾಂ

ಕಾಳಾವರ ಶ್ರೀ ಕಾಳಿಂಗ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂಪನ್ನ, ಸಹಸ್ರಾರು ಭಕ್ತರು ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ಮಂಗಳವಾರ ಸಂಭ್ರಮದಿಂದ ಜರುಗಿತು.

ಚಂಪಾಷಷ್ಠಿ ಅಂಗವಾಗಿ ದೇವಳದಲ್ಲಿ ವಿಶೇಷವಾಗಿ ಅಭಿಷೇಕ, ಪಂಚಮೃತ ಪೂಜೆ, ಮಂಗಳಾರಾತಿ, ಹಣ್ಣುಕಾಯಿ, ಹೂಕಾಯಿ, ಕಲಶ ಸಮರ್ಪಣೆ, ದೇವರ ದರ್ಶನ, ತೀರ್ಥಪ್ರಸಾದ ವಿತರಣೆ, ಋತ್ವಿಜರಿಂದ ವೇದ ಪಾರಾಯಣ, ಕ್ಷೇತ್ರ ಪ್ರದಕ್ಷಿಣೆ ಪಲ್ಲಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕಾಳಾವರ ನಮ್ಮ ಶಕ್ತಿ ಮಹಿಳಾ ಭಜನಾ ಮಂಡಳಿ ಭಜನಾ ಕಾರ್ಯಕ್ರಮ ಮತ್ತು ಶ್ರೀ ಮಹಾಲಿಂಗೇಶ್ವರ ದೇವರಿಗೆ ರಂಗಪೂಜೆಯ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಸಾಹಸ್ರಾರು ಭಕ್ತರು ಶ್ರೀ ದೇವರ ದರ್ಶನ ಪಡೆದು ಹೂ ಹಣ್ಣು ಕಾಯಿ, ಕಲಶ ಸೇವೆ, ಮಂಗಳಾರತಿ, ಹರಕೆ ಸಮರ್ಪಣೆ ಮಾಡಿದರು. ಭಕ್ತರಿಂದ ಉರುಳು ಸೇವೆ ಬೆಳಗ್ಗೆ ನಡೆಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಸ್. ಚಂದ್ರಶೇಖರ್ ಹೆಗ್ಡೆ, ವ್ಯವಸ್ಥಾಪನ ಸಮಿತಿ ಸದಸ್ಯರುಗಳು, ಅರ್ಚಕರು, ತಂತ್ರಿಗಳು, ಊರ ಗ್ರಾಮಸ್ಥರು, ಭಕ್ತ ವರ್ಗ, ಮೊದಲಾದವರು ಉಪಸ್ಥಿತರಿದ್ದರು.

Exit mobile version