Kundapra.com ಕುಂದಾಪ್ರ ಡಾಟ್ ಕಾಂ

ಆನೆಗುಡ್ಡೆ ದೇವಳಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಸೋಮವಾರ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಯಶಸ್ವಿ ಚಲನಚಿತ್ರವಾದ ಕಾಂತಾರದ ಮೂಹರ್ತ ಆನೆಗುಡ್ಡೆ ದೇವಸ್ಥಾನದಲ್ಲಿ ನಡೆದಿತ್ತು. ಚಿತ್ರದ ಯಶಸ್ಸಿನ ಬಳಿಕ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ, ರಾಧ್ಯಾ ಶೆಟ್ಟಿ ಮತ್ತು ಕುಟುಂಬಿಕರು ಆನೆಗುಡ್ಡೆ ವಿನಾಯಕನಿಗೆ ಪ್ರಿಯವಾದ ಮುಡಿಅಕ್ಕಿ, ಕಡಬು ಸೇವೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ದೇವಳದಿಂದ ರಿಷಬ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ. ದೇವಿದಾಸ್ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version