Kundapra.com ಕುಂದಾಪ್ರ ಡಾಟ್ ಕಾಂ

ಲಾವಣ್ಯ ಬೈಂದೂರು ಅಧ್ಯಕ್ಷರಾಗಿ ನರಸಿಂಹ ಬಿ. ನಾಯಕ್, ಕಾರ್ಯದರ್ಶಿಯಾಗಿ ಎಚ್. ವಿಶ್ವನಾಥ ಆಚಾರ್ಯ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕಳೆದ 45 ವರ್ಷಗಳಿಂದ ಸಕ್ರೀಯವಾಗಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗಚಟುವಟಿಕೆಗಳ ಮೂಲಕ ರಾಜ್ಯದಾದ್ಯಂತ ಗುರುತಿಸಿಕೊಂಡಿರುವ ಪ್ರತಿಷ್ಠಿತ ಲಾವಣ್ಯ ಬೈಂದೂರು ಸಂಸ್ಥೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ನರಸಿಂಹ ಬಿ. ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಚ್. ವಿಶ್ವನಾಥ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಲಾವಣ್ಯ ರಂಗಮನೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಗೌರವಾಧ್ಯಕ್ಷರಾಗಿ ಯು. ಶ್ರೀನಿವಾಸ ಪ್ರಭು, ವಿ. ಆರ್. ಬಾಲಚಂದ್ರ, ಉಪಾಧ್ಯಕ್ಷರಾಗಿ ರಾಮ ಕೆ., ರವೀಂದ್ರ ಶ್ಯಾನುಭಾಗ್, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಪರಮಾನಂದ, ರೋಶನ್ ಕುಮಾರ್, ರಾಜೇಶ್ ನಾಯ್ಕ, ಕೋಶಾಧಿಕಾರಿ ಸುರೇಶ್ ಹುದಾರ್, ಸಂಘಟನಾ ಕಾರ್ಯದರ್ಶಿಯಾಗಿ ಸುಮಂತ್ ಆಚಾರ್ಯ, ಶಶಾಂಕ್ ಕಾರಂತ್, ಶ್ರೀಧರ್ ವಸ್ರೆ. ವ್ಯವಸ್ಥಾಪಕರಾಗಿ ಹರೆಗೋಡು ಉದಯ್ ಆಚಾರ್ಯ, ಮೂರ್ತಿ ಬೈಂದೂರು, ಸುಬ್ರಹ್ಮಣ್ಯ ಎಸ್., ಗೌರವ ಸಲಹೆಗಾರರಾಗಿ ನಾಕಟ್ಟೆ ನಾಗರಾಜ ಶೆಟ್ಟಿ, ಸದಾಶಿವ ಡಿ. ಪಡುವರಿ, ನಾಗರಾಜ ಗಾಣಿಗ ಬಂಕೇಶ್ವರ, ವಿಶ್ವನಾಥ ಶೆಟ್ಟಿ, ಸುನಿಲ್ ಎಚ್. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ. ಗಣೇಶ್ ಕಾರಂತ್, ಬಿ. ರಾಮ ಟೈಲರ್, ಗಣಪತಿ ಎಸ್., ಗಿರೀಶ್ ಬೈಂದೂರು, ಬಿ. ಕೃಷ್ಣಮೂರ್ತಿ ಕಾರಂತ್, ಸತ್ಯಪ್ರಸನ್ನ, ನಾಗೇಂದ್ರ ಬಂಕೇಶ್ವರ, ಬಾಲಕೃಷ್ಣ ಬಿ., ನಾರಾಯಣ ಕೆ., ನಾಗರಾಜ ಯಡ್ತರೆ, ದಯಾನಂದ ಪಿ., ದಿನೇಶ್ ಕೆ, ರಾಜಶೇಖರ್, ನಾಗರಾಜ ಕಾರಂತ್ ಇವರು ಆಯ್ಕೆಯಾದರು.

Exit mobile version