Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಎಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಸಂಗೀತ ಪರಿಕರಗಳ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಶುಕ್ರವಾರ ಭೇಟಿ ನೀಡಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕುಟೀರದ ವಿದ್ಯಾರ್ಥಿಗಳ ಸಂಗೀತ ಕಲಿಕೆಗಾಗಿ ಅಂದಾಜು ರೂ.50,000 ಮೌಲ್ಯದ ಕೀಬೋರ್ಡ್ ಹಾಗೂ ಇನ್ನಿತರ ಸಂಗೀತ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು.

ಈ ವೇಳೆ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಧಾರ್ಮಿಕ ಮಂತ್ರ ಪಠಣ, ಸಂಗೀತ ಅಭ್ಯಾಸ ಮೊದಲಾದವುಗಳನ್ನು ಕಲಿಸುವ ಮೂಲಕ ಅವರನ್ನು ಸಂಸ್ಕಾರವಂತರನ್ನಾಗಿ ಮಾಡುವ ಕಾರ್ಯವನ್ನು ಹಲವಾರು ವರ್ಷಗಳಿಂದ ಮಾಡುತ್ತಾ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವಾ ಕಾರ್ಯವನ್ನು ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯುವಂತಾಗಲಿ ಎಂದು ಶುಭಕೋರಿದರು.

ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಸ್ವಾಗತಿಸಿ, ವಂದಿಸಿದರು. ಈ ವೇಳೆ ವಿದ್ಯಾರ್ಥಿಗಳು ವಿವಿಧ ಸ್ತೋತ್ರ ಪಠಣ ಮಾಡಿದರು.

Exit mobile version