Kundapra.com ಕುಂದಾಪ್ರ ಡಾಟ್ ಕಾಂ

ಫ್ರೆಂಡ್ಸ್ ಮಾರಿಕಾಂಬಾ ಟ್ರೋಪಿ: ಅಂಗವಿಕಲರಿಗೆ ಉಚಿತ ಸೈಕಲ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತ್ತಿಚಿಗೆ ತಾಲೂಕಿನ ಕಳವಾಡಿಯಲ್ಲಿ ಜರುಗಿದ ಫ್ರೆಂಡ್ಸ್ ಮಾರಿಕಾಂಬಾ ಟ್ರೋಪಿ 2023ಕ್ರಿಕೆಟ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಉಚಿತ ಸೈಕಲ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ, ನಿವೃತ್ತ ವಿಜಯ್ ಬ್ಯಾಂಕ್ ಅಧಿಕಾರಿ ಎಚ್ ವಸಂತ ಹೆಗ್ಡೆ, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರು ರಾಜೀವ್ ಶೆಟ್ಟಿ ಅಧ್ಯಕ್ಷರಾದ ಆದೀಶ್ ದೇವಾಡಿಗ ಕಾರ್ಯದರ್ಶಿ ಪ್ರವೀಣ್ ಕುಮಾರ್ ಸಂಸ್ಥೆಯ ಸರ್ವ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಕ್ರಿಕೆಟ್ ಪಂದ್ಯಾಟದದಲ್ಲಿ ಪ್ರಥಮ ನ್ಯೂ ಫ್ರೆಂಡ್ಸ್ ಕೋಣಿ ಹಾಗೂ ದ್ವಿತೀಯ 8 ಸ್ಟಾರ್ ಉಪ್ಪುಂದ ವಿಜಯಿಶಾಲಿ ಆಗಿರುತ್ತದೆ. ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಬಿ ಎಸ್ ಎನ್ ಎಲ್ ನೌಕರರು ರಾಮ ಮೊಗವೀರ ಕೃಷ್ಣ ರೆಡ್ಡಿ ಮತ್ತು ಪ್ರಶಸ್ತಿಯನ್ನು ಹಸ್ತಾಂತರಿಸಿದ.ರು ಈ ಸಂದರ್ಭದಲ್ಲಿ ಫ್ರೆಂಡ್ಸ್ ಮಾರಿಕಾಂಬ ಕ್ರಿಕೆಟರ್ಸ್ ಸರ್ವ ಪದಾಧಿಕಾರಿಗಳು, ಸರ್ವಸದಸ್ಯರು ಉಪಸ್ಥಿತರಿದ್ದರು.

Exit mobile version