Site icon Kundapra.com ಕುಂದಾಪ್ರ ಡಾಟ್ ಕಾಂ

ಕಂಬದಕೋಣೆ: ನಿವೃತ್ತ ಮುಖ್ಯ ಶಿಕ್ಷಕ ಕೆ. ಆನಂದ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಹಳಗೇರಿ ಕೆಳಾಮನೆಯ ನಿವೃತ್ತ ಮುಖ್ಯ ಶಿಕ್ಷಕ ಕೆ. ಆನಂದ ಶೆಟ್ಟಿ (80 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ.

ಕಂಬದಕೋಣೆ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ 25 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿದ್ದ ಆನಂದ ಶೆಟ್ಟಿ ಅವರು, ಶಿರೂರು ಪ್ರೌಢಶಾಲೆಯಲ್ಲಿಯೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕುಟುಂಬಿಕರೊಂದಿಗೆ ಕಂಬದಕೋಣೆಯಲ್ಲಿಯೇ ನೆಲೆಸಿದ್ದರು.

ಮೃತರು ಪತ್ನಿ, ಮೂವರು ಹೆಣ್ಣು ಮಕ್ಕಳು, ಬಂಧು ಬಳಗ ಹಾಗೂ ಶಿಷ್ಯ ವರ್ಗವನ್ನು ಅಗಲಿದ್ದಾರೆ.

Exit mobile version