Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು: 400 ವರ್ಷಗಳ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ತಾಲೂಕಿನ ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕಿನಲ್ಲಿ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ ಎಂದು ಇತಿಹಾಸ ಸಂಶೋಧಕ ಫ್ರೊ.ಟಿ. ಮುರುಗೇಶ್ ಮಾಹಿತಿ ನೀಡಿದ್ದಾರೆ.

ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಅವರು ಸಂಶೋಧಕರ ಗಮನಕ್ಕೆ ತಂದಿದ್ದಾರೆ. ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು, ಈ ಪಾರ್ಕ ಅಭಿವೃದ್ಧಿ ಕಾರ್ಯದ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಮೆಂಡನ್ ನೇತೃತ್ವದಲ್ಲಿ ಜಾಗ ಸಮತಟ್ಟು ಮಾಡುವ ಸಂಧರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ.

ಕಲ್ಲಿನಲ್ಲಿ ಸೂಯ೯, ಚಂದ್ರ, ಶಿವಲಿಂಗ, ನಂದಿ ವಿಗ್ರಹ ಇರುವುದು ಕಂಡು ಬಂದಿದೆ.

ಕಾಲ: ಕೆಳದಿಯ ಸ.ಸೂ ನಾಲ್ಕು ನೂರು ವಷ೯ದ ಹಳೆಯ ಲಿಂಗ ಮುದ್ರಿಕೆ ಕಲ್ಲು ವರದಿಯಂತೆ ಸೂರ್ಯ, ಚಂದ್ರ, ಇರುವ ತನಕ ಅಜರಾಮರವಾಗಿ ಇರಲಿ ಯೆನ್ನುವಂತ ಸಂದೇಶ ನೀಡುವಂತಿದೆ.

ಶೈವರು ಶಿವನನ್ನು, ವೈಷ್ಣವರು ವಿಷ್ಣುವಿನನ್ನು, ಜೈನರು ತೀಥ೯ಂಕರರನ್ನು ಆರಾಧಿಸುವುದು ಸಾಮಾನ್ಯವಾಗಿತ್ತು. ಶೈವರ ಗಡಿಗಳನ್ನು ಲಿಂಗ ಮುದ್ರೆ ಕಲ್ಲನ್ನು ವೈಷ್ಣವರು ವಾಮನ ಮುದ್ರೆ ಕಲ್ಲನ್ನು ಜೈನರು ಮುಕ್ಕೊಡೆ ಕಲ್ಲುಗಳನ್ನು ಹಾಕುತ್ತಿದ್ದರು. ಆ ಮೂಲಕ ಅವರ ಗಡಿಗಳನ್ನು ಗುರುತು ಮಾಡುವುದು ಸಹಜವಾಗಿತ್ತು. ಅಂತೆಯೇ ಬಸ್ರೂರು ಲಿಂಗ ಮುದ್ರೆ ಕಲ್ಲುಗಳನ್ನು ಗಡಿಗೆ ಸಂಬಂಧಿಸಿದ ಗಡಿಯ ಕಲ್ಲುಗಳನ್ನು ಹಾಕಲಾಗಿತ್ತು.

ಇತಿಹಾಸದ ಸಂಭಂದಿಸಿದ ಶಾಸನ, ವೀರಗಲ್ಲು, ವಕೈ ಮಾಸ್ತಿ ಕಲ್ಲು, ಲಿಂಗ ಮುದ್ರೆ ಕಲ್ಲು ಉಳಿಸುವಲ್ಲಿ ಸಾವ೯ಜನಿಕರ ಸಹಕಾರ ಹಾಗೂ ಉಳಿಸುವಲ್ಲಿ ಸೇವೆ ಅಗತ್ಯವಾಗಿದೆ. ನಮ್ಮ ನಮ್ಮ ಊರಿನಲ್ಲಿ ಇತಿಹಾಸದ ದಾಖಲೆ ಉಳಿಸಬೇಕಾಗಿದೆ ಮುರುಗೇಶ್ ಅವರು ಹೇಳಿದ್ದಾರೆ.

ಈ ಹಿಂದೆ ಶಾಂತಾವರ ವೀರಾಂಜನೇಯ ಅಣತಿ ದೂರದಲ್ಲಿ ವಾಮನ ಮುದ್ರೆ ಕಲ್ಲು,ರಮಾನಂದ ಶೆಟ್ಟಿಗಾರ ಮನೆ ಬಳಿ ಲಿಂಗ ಮುದ್ರೆ ಕಲ್ಲು ನಾವು ನೋಡಬಹುದಾಗಿದೆ.

ಈ ಲಿಂಗ ಮುದ್ರೆ ಕಲ್ಲು ಪತ್ತೆ ಹಚ್ಚುವಲ್ಲಿ ಪಾರ್ಕ್ ಸಮಿತಿಯ ಕಾಯ೯ದಶಿ೯ಯವರಾದ ನಿತೇಶ್ ಶೆಟ್ಟಿ ಬಸ್ರೂರು ,ಮಧುಸೂಧನ್ ಭಟ್ ಸಹಕರಿಸಿರುತ್ತಾರೆ.

Exit mobile version