Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಆಸ್ತಿ ಮೌಲ್ಯಕ್ಕಿಂತ ಸಾಲ ಹೆಚ್ಚು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ಬೈಂದೂರು ತಾಲೂಕು ಬಿಜೂರು ನಿವಾಸಿ ಗುರುರಾಜ್ ಶೆಟ್ಟಿ ಗಂಟಿಹೊಳೆ (42) ಅವರ ಒಟ್ಟು ಆದಾಯ 7.63 ಕೋಟಿ ರೂ. ಆಗಿದ್ದರೆ, ಪತ್ನಿ ಅನುರಾಧ ಶೆಟ್ಟಿ ಅವರ ಆದಾಯ 2.12 ಕೋಟಿ ರೂ. ಇದೆ. ಗುರುರಾಜ ಅವರು ವೈಯಕ್ತಿಕವಾಗಿ 1.64 ಕೋಟಿ ರೂ. ಸಾಲವನ್ನು ಹೊಂದಿದ್ದರೆ, 45ಶೇ. ಶೇರನ್ನು ಹೊಂದಿರುವ ಶ್ರೀ ಕ್ಯಾಶ್ಯೂ ಫರ್ಮ್ನಲ್ಲಿ 9,10,63,000 ಸಾಲವನ್ನು ಹೊಂದಿದ್ದಾರೆ ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿದವಿಟ್‌ನಲ್ಲಿ ತಿಳಿಸಲಾಗಿದೆ.

ಗುರುರಾಜ್ ಅವರ ಬಳಿ 1,76,844 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 7,61,40,000ರೂ. ಆಗಿದೆ. ಇದರಲ್ಲಿ ಪಿತ್ರಾರ್ಜಿತ ಆಸ್ತಿಯ ಮೌಲ್ಯ 32,70,000 ರೂ. ಆಗಿದ್ದರೆ, ಸ್ವಯಾರ್ಜಿತ ಆಸ್ತಿ ಮೌಲ್ಯ 7,28,70,00ರೂ. ಎಂದು ತಿಳಿಸಲಾಗಿದೆ.

ಗುರುರಾಜರ ಪತ್ನಿ ಅನುರಾಧ ಅವರಲ್ಲಿ 18,74,166 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 1,93,50,000 ರೂ. ಆಗಿದೆ. ಅವರಲ್ಲಿ 8.65 ಲಕ್ಷ ರೂ. ಮೌಲ್ಯದ 346ಗ್ರಾಂ ಚಿನ್ನಾಭರಣಗಳಿವೆ. ಇಬ್ಬರ ಕೈಯಲ್ಲೂ 35,000 ಹಾಗೂ 70,000ರೂ.ನಗದು ಹಣವಿದೆ.

ಗುರುರಾಜ್ ಅವರು ವೈಯಕ್ತಿಕವಾಗಿ 1.64 ಕೋಟಿ ರೂ. ಸಾಲವನ್ನು ಹೊಂದಿದ್ದರೆ, 45ಶೇ. ಶೇರ್ನ್ನು ಹೊಂದಿರುವ ಶ್ರೀ ಕ್ಯಾಶ್ಯ ಫರ್ಮ್ನಲ್ಲಿ 9,10,63,000 ಸಾಲವನ್ನು ಹೊಂದಿದ್ದಾರೆ ಎಂದು ಅಫಿದವತ್ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ► ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಅವರ ಆಸ್ತಿ ಎಷ್ಟು ಗೊತ್ತಾ? – https://kundapraa.com/?p=66168 .

ಗುರುರಾಜ್ ವಿರುದ್ಧ ಯಾವುದೇ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿಲ್ಲ. ಆದರೆ 2018ರಲ್ಲಿ ಆರು ಲಕ್ಷ ರೂ. ಮೊತ್ತದ ಚೆಕ್ಬೌನ್ಸ್ ಕೇಸಿನಲ್ಲಿ ಕುಂದಾಪುರ ನ್ಯಾಯಾಲಯ ಅವರಿಗೆ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಇದಕ್ಕೆ 2022ರಲ್ಲಿ ಕುಂದಾಪುರ ಜೆಎಂಎಫ್ಸಿ ನ್ಯಾಯಾಲಯ ದಿಂದ ತಡೆಯಾಜ್ಞೆ ಪಡೆಯಲಾಗಿದೆ. ಇದರ ವಿಚಾರಣೆ ಮೇ ತಿಂಗಳಲ್ಲಿ ನಡೆಯಲಿದೆ ಎಂದು ಅಫಿದವತ್ನಲ್ಲಿ ಹೇಳಲಾಗಿದೆ.

Exit mobile version