Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬಿಜೆಪಿ ಮುಖಂಡರಾದ ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ ಸೇರಿದಂತೆ ಹಲವರು ಕಾಂಗ್ರೆಸ್‌ಗೆ ಸೇರ್ಪಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಎ23
: ಬೈಂದೂರು ಬಿಜೆಪಿಯ ಹಿರಿಯ ನಾಯಕ, ಜಿ.ಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ, ಜಿಪಂ ಮಾಜಿ ಸದಸ್ಯ ಶಂಕರ ಪೂಜಾರಿ ಸೇರಿದಂತೆ ಬೈಂದೂರು ಮಂಡಲ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬೈಂದೂರು ಜೆ.ಎಸ್.ಆರ್ ಕಲಾಮಂದಿರದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು.

ಕೆ. ಬಾಬು ಶೆಟ್ಟಿ ಅವರು ಕಳೆದ ಮುರು ದಶಕಗಳಿಂದ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, 4 ಭಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದರು. ಶಂಕರ ಪೂಜಾರಿ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಬಿಜೆಪಿಗೆ ಕರೆತಂದಿದ್ದರು. ಆ ಬಳಿಕ ಜಿ.ಪಂ ಸದಸ್ಯರಾಗಿದ್ದಲ್ಲದೇ ಪಕ್ಷ ಸಂಘಟನೆಯಲ್ಲಿಯೂ ತೊಡಗಿಕೊಂಡಿದ್ದರು. ಸದಾಶಿವ ಪಡುವರಿ ಅವರು ಪಡುವರಿ ಪಂಚಾಯತ್ ಉಪಾಧ್ಯರಾಗಿ ಸೇವೆ ಸಲ್ಲಿಸಿದವರು. ವೆಂಕಟ ಪೂಜಾರಿ ತಾಪಂ ಸದಸ್ಯರೂ ಆಗಿದ್ದರು. ವಂಡ್ಸೆ ದೀಪಕ್ ಶೆಟ್ಟಿ ಬಿಜೆಪಿ ನಾಯಕರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಒಟ್ಟು 70ಕ್ಕೂ ಅಧಿಕ ಮಂದಿ ಬೈಂದೂರು ಹಾಗೂ ವಂಡ್ಸೆ ಬ್ಲಾಕ್‌ನ ಬಿಜೆಪಿ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಪಕ್ಷಕ್ಕೆ ಸೇರ್ಪಡೆಯಾದರು.

Exit mobile version