Kundapra.com ಕುಂದಾಪ್ರ ಡಾಟ್ ಕಾಂ

ಶಂಕರನಾರಾಯಣ ಮದರ್ ತೆರೆಸಾ ಪಿಯು ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಮಾರ್ಚ್ 2023ರಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದಿದ್ದು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾಲೇಜನಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಕಾವ್ಯ ಹಾಗೂ ಪ್ರತೀಕಾ ಅವರನ್ನು ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ ಪಡೆದ ಚಂದ್ರಾ ಅವರನ್ನು ಸನ್ಮಾನಿಸಲಾಯಿತು.

ಇದರೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಒಟ್ಟು 110 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹವಾದ ವಿಷಯವಾಗಿದೆ.

2023-24ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಈಗಾಗಲೇ ಕಾಲೇಜಿನಲ್ಲಿ ಪ್ರಾರಂಭಗೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದಕೊಳ್ಳಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ. Click here for admission details

Exit mobile version