Kundapra.com ಕುಂದಾಪ್ರ ಡಾಟ್ ಕಾಂ

ಬಜರಂಗದಳ ಪ್ರತಿಭಟನೆ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಮೇ.10ರಂದು ಹಿಂದೂ ಸಮಾಜ ಉತ್ತರ ನೀಡಲಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರಣಾಳಿಕೆ ಮೂಲಕ ತೋರಿಸಿದೆ. ಮೇ 10ರಂದ ನಡೆಯಲಿರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ. ಹಿಂದು ಸಮಾಜ ಒಂದಾಗಿ ಕಾಂಗ್ರೆಸ್ ಈ ಕುಟಿಲ ತಂತ್ರದ ವಿರುದ್ಧ ಸಮರ ಸಾರಬೇಕು ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು ಹೇಳದರು.

ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವುದು ಮತ್ತು ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಕೆ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಬೈಂದೂರು ಪೇಟೆಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಗೋ ಹತ್ಯೆ ಮತ್ತು ಮತಾಂತರದ ವಿರುದ್ಧ ಹೋರಾಟ ನಡೆಸುತ್ತಿರುವ ಬಜರಂಗದಳವನ್ನು ಹತ್ತಿಕ್ಕಲು ಮತ್ತು ಭಯೋತ್ಪಾದಕರಿಗೆ ಕುಮ್ಮಕ್ಕು ನೀಡಲು ಕಾಂಗ್ರೆಸ್ ಪಕ್ಷ ಬಜರಂಗದಳವನ್ನು ಬ್ಯಾನ್ ಮಾಡಲು ಮುಂದಾಗಿದೆ. ಕಾಂಗ್ರೆಸ್ ಈ ನೀತಿಯನ್ನು ಸಹಿಸಲು ಸಾಧ್ಯವೇ ಇಲ್ಲ.

ಗೋಪಾಲ ಪೂಜಾರಿಯವರೇ ನೀವು ಕೇಸರಿ ಸಾಲು ಧರಿಸಿ ನಮ್ಮದೇನು ಅಭ್ಯಂತರ ಇಲ್ಲ. ಆದರೆ ಡೋಂಗಿ ಹಿಂದುತ್ವವನ್ನು ಪ್ರದರ್ಶಿಸಬೇಡಿ. ಇನ್ನು ಮುಂದೆ ಕಾಂಗ್ರೆಸ್ ಪಕ್ಷ ಬಜರಂಗದಳದ ವಿಚಾರಕ್ಕೆ ಬಂದರೆ ಕಾಂಗ್ರೆಸ್ ಕಚೇರಿಯ ಮೇಲೆ ನಮ್ಮ ಭಗವದ್ವಜ ಹಾರಿಸಬೇಕಾಗುತ್ತದೆ ಎಂದು ಶ್ರೀಧರ್ ಬಿಜೂರ್ ಅವರು ಎಚ್ಚರಿಕೆ ನೀಡಿದರು.

ಬಜರಂಗದಳ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಸಂಗಮ್, ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡ ಕಾರ್ಯದರ್ಶಿ ಶ್ರೀನಿವಾಸ್ ಮುದೂರ್, ತಾಲೂಕು ಬಜರಂಗದಳ ಸಂಚಾಲಕ ಸುಧಾಕರ್ ಶೆಟ್ಟಿ, ವಸಂತ ಸಂಗಮ್, ಪುಷ್ಪರಾಜ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Exit mobile version