Kundapra.com ಕುಂದಾಪ್ರ ಡಾಟ್ ಕಾಂ

ಅಳ್ವೆಕೋಡಿ – ಕರ್ಕಿಕಳಿ ಭಾಗದಲ್ಲಿ ಬೈಂದೂರು ಕಾಂಗ್ರೆಸ್ ಭರ್ಜರಿ ಪ್ರಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನ ಅಳ್ವೆಕೋಡಿಯಿಂದ ಕರ್ಕಿಕಳಿಯ ತನಕ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.

ಈ ಸಂದರ್ಭ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಲೇ ಬಂದಿದೆ. ಕರಾವಳಿ ಭಾಗದಲ್ಲಿ ಮೀನುಗಾರರ ಬೇಡಿಕೆಗಳಿಗೆ ವಿಶೇಷ ಆದ್ಯತೆ ನೀಡಿ ಅದನ್ನು ಈಡೆರಿಸುವ ಕೆಲಸ ಮಾಡಲಾಗಿದೆ. ಬೈಂದೂರು ವಿಧಾನಸಬಾ ಕ್ಷೇತ್ರದಲ್ಲಿ ನಾಲ್ಕು ಅವಧಿಗೆ ಶಾಸಕನಾದಾಗಲೂ ಎಲ್ಲಾ ಹಂತದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಗ್ಯಾರೆಂಟಿ ಹಾಗೂ ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬೆಂಬಲಿಸಿ ಎಂದರು.

ರೋಡ್ ಶೋ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್ ಉಪ್ಪುಂದ, ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸೇರಿದಂತೆ ವಿವಿಧ ನಾಯಕರು ಉಪಸ್ಥಿತರಿದ್ದರು.

Exit mobile version