Kundapra.com ಕುಂದಾಪ್ರ ಡಾಟ್ ಕಾಂ

ಕಡಲ ಕೊರೆತ ಹಾನಿಯ ಬಗ್ಗೆ ಸೂಕ್ತ ಕ್ರಮವಹಿಸಿ: ಉಡುಪಿ ಉಸ್ತುವಾರಿ ಸಚಿವರಿಗೆ ಸಂಸದರ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭಕೋರಿದರು.

ಈ ವೇಳೆ ಅವರು ಬೈಂದೂರು ತಾಲೂಕಿನಲ್ಲಿ ಕಡಲ ಕೊರೆತದಿಂದ ಉಂಟಾದ ಪ್ರದೇಶಗಳಲ್ಲಿ ಹಾನಿಯ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸೂಕ್ತ ಕ್ರಮಕೈಕೊಳ್ಳುವಂತೆ ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.

Exit mobile version