ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿಗೆ ಸಮೀಪದ ನಾಗೋಡಿಯ ಕಂಚಿಕೆರೆ ಎಂಬಲ್ಲಿ ಸ್ಥಳೀಯ ನಿವಾಸಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕಂಚಿಕೆರೆಯ ಗಣೇಶ್ ದಾಳಿಯಿಂದ ಗಂಭೀರ ಗಾಯಗೊಂಡಿದ್ದಾರೆ.
ಗುರುವಾರ ರಾತ್ರಿ ಗಣೇಶ್ ಅವರ ಮನೆ ಅಂಗಳಕ್ಕೆ ಚಿರತೆ ಬಂದ ವೇಳೆ ನಾಯಿಗಳು ಏಕಾಏಕಿ ಬೊಗಳಲಾರಂಭಿಸಿವೆ. ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಆಕ್ರೋಶಗೊಂಡ ಚಿರತೆ ಗಣೇಶ್ ಮೇಲೆಯೇ ಎಗರಿದೆ.ಗಾಯಗೊಂಡ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯವರ ಕೂಗಾಟಕ್ಕೆ ಅಕ್ಕಪಕ್ಕದವರು ಓಡಿ ಬಂದಾಗ ಚಿರತೆ ಗಣೇಶ್ ಅವರನ್ನು ಬಿಟ್ಟು ಓಡಿ ಹೋಗಿದ್ದು ಇದುವರೆಗೆ ನಾಯಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಮನುಷ್ಯರ ಮೇಲೂ ಎರಗಲು ಆರಂಭಿಸಿದ್ದು ಜನತೆ ಕಂಗಾಲಾಗಿದ್ದಾರೆ.
ಕಾಡುಪ್ರಾಣಿಗಳು ಆಹಾರ ಅರಸಿ ಕಾಡು ಬಿಟ್ಟು ನಾಡಿಗೆ ಬರುತ್ತಿದ್ದು, ಈ ಪೈಕಿ ಚಿರತೆ ಹೆಚ್ಚಿಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.