Kundapra.com ಕುಂದಾಪ್ರ ಡಾಟ್ ಕಾಂ

ಜೆಸಿಐ ಚಿತ್ತೂರು ಮಾರಣಕ ಟ್ಟೆ ಘಟಕಕ್ಕೆ ಹಲವು ಪ್ರಶಸ್ತಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
6 ತಿಂಗಳ ಅವಧಿಯಲ್ಲಿ ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ, ಸ್ವಚ್ಛತಾ ಅಭಿಯಾನ, ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಮಹನೀಯರನ್ನು ಗುರುತಿಸಿ ಸನ್ಮಾನ, ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹ, ಶಾಲಾ ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಿ ಪ್ರೋತ್ಸಾಹ ಹೀಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿ ಮೆಚ್ಚುಗೆ ಪಡೆದ ಜೆಸಿಐ ಚಿತ್ತೂರು ಮಾರಣಕಟ್ಟೆ ವಲಯದ ಉತ್ತಮ ಘಟಕ ಪ್ರಶಸ್ತಿಯ ಜೊತೆಗೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ.

ಘಟಕದ ಅಧ್ಯಕ್ಷರಾದ ಜೆಸಿಐ ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ಹಾಗೂ ಕಾರ್ಯದರ್ಶಿ ವಿಜಯ ಆಚಾರ್ಯ ಮಾರಣಕಟ್ಟೆ ಪ್ರಶಸ್ತಿ ಪಡೆಯುವಲ್ಲಿ ಶ್ರಮಿಸಿದ ಸ್ಥಾಪಕ ಅಧ್ಯಕ್ಷರು, ಪೂರ್ವಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ನಮ್ಮ ಘಟಕದೊಂದಿಗೆ ಕೈ ಜೋಡಿಸಿದ ಸರ್ವರನ್ನು ಸ್ಮರಿಸಿದರು.

Exit mobile version