Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ವನಮಹೋತ್ಸವ – ಗೀಡಗಳನ್ನು ಬೆಳೆಸುವ ಸ್ವರ್ಧೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರೋಟರಿ ಕ್ಲಬ್ ಬೈಂದೂರು ಹಾಗೂ ಇನ್ನರ್ವೀಲ್ ಕ್ಲಬ್ ಬೈಂದೂರು ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ರತ್ತು ಬಾಯಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವೃಕ್ಷ ರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಪ್ರಸಾದ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇನ್ನರ್ವೀಲ್ ಅಧ್ಯಕ್ಷೆ ಚಂದ್ರಿಕಾ ರಾಮು, ಕಾರ್ಯದರ್ಶಿ ಮಾನಸ ರಾವ್, ಅರಣ್ಯ ಇಲಾಖೆಯ ರವಿರಾಜ್, ರೋಟರಿ ಪೂರ್ವಾಧ್ಯಕ್ಷರಾದ ಐ. ನಾರಾಯಣ, ಗೋವಿಂದ ಎಮ್.,ಉಪಸ್ಥಿತರಿದ್ದರು.

ರತ್ತುಬಾಯಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಆನಂದ ಮದ್ದೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಟರಾಕ್ಟ್ ಸಂಯೋಜಕ ಪ್ರಕಾಶ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು.

Exit mobile version