Kundapra.com ಕುಂದಾಪ್ರ ಡಾಟ್ ಕಾಂ

ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಹೃದಯಘಾತದಿಂದ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಕರ್ತವ್ಯ ನಿರತ ವಿಜಯಪುರ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ್ ನಾಯಕ್ ಮೃತಪಟ್ಟಿದ್ದಾರೆ.

ಉತ್ತರ ಕನ್ನಡದ ಮೂಲದ ಅರುಣ್ ನಾಯಕ್ ಅವರು ಪಿಎಸ್ಐ, ವೃತ್ತ ನಿರೀಕ್ಷಕರಾಗಿ ಬೈಂದೂರು ಬ್ರಹ್ಮಾವರ ಉಡುಪಿ ಮೊದಲಾದೆಡೆ ಸೇವೆ ಸಲ್ಲಿಸಿ ಖ್ಯಾತಿ ಗಳಿಸಿದ್ದರು.

ಅರುಣ್ ನಾಯಕ್ ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅರುಣ್ ನಾಯಕ್ ಅವರ ಪತ್ನಿ ಬೆಂಗಳೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ತಮ್ಮ ಮಗನೊಂದಿಗೆ ವಾಸವಾಗಿದ್ದಾರೆ.

Exit mobile version