Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಪೊಲೀಸ್ ಇನ್ಸ್‌ಪೆಕ್ಟರ್‌ ವರ್ಗಾವಣೆ: ಸಂತೋಷ್ ಕಾಯ್ಕಿಣಿ ಅವರ ಸ್ಥಾನಕ್ಕೆ ಸವಿತ್ರತೇಜ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.01:
ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 211 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಐಜಿ ಆದೇಶ ಹೊರಡಿಸಿದ್ದಾರೆ.

ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್‌ ಸಂತೋಷ್ ಕಾಯ್ಕಿಣಿ ಅವರ ಅವರ ಸ್ಥಾನಕ್ಕೆ ಮಂಗಳೂರು ಸಿಟಿ ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಆಗಿದ್ದ ಸವಿತ್ರತೇಜ್ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.

ಬೈಂದೂರು ಇನ್ಸ್‌ಪೆಕ್ಟರ್‌ ಸಂತೋಷ್ ಕಾಯ್ಕಿಣಿ ಅವರು ನೂತನ ಸ್ಥಳದ ನಿರೀಕ್ಷೆಯಲ್ಲಿದ್ದು, ಆದೇಶ ಕಾಯ್ದಿರಿಸಲಾಗಿದೆ.

Exit mobile version