Site icon Kundapra.com ಕುಂದಾಪ್ರ ಡಾಟ್ ಕಾಂ

ಕಾರ್ಗಿಲ್ ವಿಜಯ್ ದಿವಸ್: ನಿವೃತ್ತ ಯೋಧರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಯೋಧ ಟಿ.ದಿನಕರ ಶೆಣೈ ಅವರು ಕಾರ್ಗಿಲ್ ಕದನದ ಬಗ್ಗೆ ಹಾಗೂ ಕಾರ್ಗಿಲ್ ಪರಿಸ್ಥಿತಿ ಬಗ್ಗೆ ಮಾತನಾಡಿದರು. ಇದೇ ಸಂದರ್ಭ ನಿವೃತ್ತ ಯೋಧರಾದ ರತ್ನಾಕರ ಬೈಂದೂರು ಮತ್ತು ಟಿ.ದಿನಕರ ಶೆಣೈ ಅವರನ್ನು ಗೌರವಿಸಲಾಯಿತು. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧರಿಗಾಗಿ ದೀಪ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಕ್ಷಮಾ, ರೋಟರಿ ಮತ್ತು ರೋಟರ್ಯಾಕ್ಟ್ ಸದಸ್ಯರು ಉಪಸ್ಥಿತರಿದ್ದರು.

ಎಂ. ನಾಗೇಂದ್ರ ಪೈ ಸ್ವಾಗತಿಸಿದರು. ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ ವಂದಿಸಿದರು.

Exit mobile version