Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಬೃಹತ್ ಉದ್ಯೋಗ ಮೇಳ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ: ವಿ
ದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಉದ್ಯೋಗ ಮೇಳ ಕಾಲೇಜು ಆವರಣದಲ್ಲಿ ನಡೆಯಿತು.

ಪ್ರಮುಖ 30 ಅಧಿಕ ಪ್ರತಿಷ್ಠಿತ ಕಂಪನಿಗಳು ಆಗಮಿಸಿ ವಿವಿಧ ಹುದ್ದೆಗಳಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು . ಕಾರ್ಯಕ್ರಮದಲ್ಲಿ ಶ್ರೀ ಜೀವನ್ ಕುಮಾರ್ ಹೆಚ್.ಆರ್ ರಿಕ್ರೂಟರ್, ಶ್ರೀ ಸುಬ್ರಹ್ಮಣ್ಯ ಸಂಸ್ಥಾಪಕರು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ,ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್

ಪ್ಲೇಸ್ಮೆಂಟ್ ಆಫೀಸರ್ ಕುಮಾರಿ ವೈಷ್ಣವಿ ಹಾಗೂ ಎಲ್ಲಾ ಕಂಪನಿಯ ಹೆಚ್. ಆರ್ ಮ್ಯಾನೇಜರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಉದ್ಯೋಗಗಾಂಕ್ಷಿಗಳು ನಮ್ಮ ಸಂಸ್ಥೆ ಸಂಘಟಿಸಿರುವ ಇಂತಹ ಕಾರ್ಯಕ್ರಮವನ್ನು ಪ್ರಯೋಜನ ಪಡೆಯುವಂತೆ ತಿಳಿಸಲಾಯಿತು.

ಸುಮಾರು 1500ಕ್ಕಿಂತಲೂ ಹೆಚ್ಚು ನೋಂದಣಿ ನಡೆದಿದ್ದು ಅದರಲ್ಲಿ 600 ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಆದೇಶ ಪತ್ರವನ್ನು ವಿತರಿಸಿ190 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ನಡೆಸಲಾಯಿತು. ಅತಿಥಿಗಳ ಪರಿಚಯವನ್ನು ಉಪನ್ಯಾಸಕಿ ಕುಮಾರಿ ಹೀಬಾ ಹಾಗೂ ಸಂಸ್ಥಾಪಕರ ಪರಿಚಯವನ್ನು ಉಪನ್ಯಾಸಕಿ ಶ್ರೀ ಲಕ್ಷ್ಮಿ ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾ

ರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರೆ, ಉಪನ್ಯಾಸಕಿ ಕುಮಾರಿ ಸೋಫಿಯಾ ಡಿಸೋಜ ಸ್ವಾಗತಿಸಿ, ಉಪನ್ಯಾಸಕಿ ಕುಮಾರಿ ಹಾಫೀಝಾ ವಂದಿಸಿದರು.

Exit mobile version