Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ ಮಹಿಳಾ ಯಕ್ಷಗಾನ ಬೆಂಗಳೂರು ಆಯೋಜಿಸಿದ ಯಕ್ಷಗಾನ ಉತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಈ ಸಂಸ್ಥೆ ಏರ್ಪಡಿಸುವ “ಯಕ್ಷಗಾನ ಉತ್ಸವ” ಕಾರ್ಯಕ್ರಮ ಭಾನುವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯಿತು.

ಯಕ್ಷಗಾನ ಪೂರ್ವರಂಗ ಕಾರ್ಯಕ್ರಮವನ್ನು ಯಕ್ಷಗಾನ ವಿದ್ವಾಂಸರು & ಖ್ಯಾತ ಮೃದಂಗ ವಾದಕರಾದ ಆಗಿರುವ ಎ.ಪಿ ಪಾಠಕ್ & ಮಟ್ಟಿ ರಾಮಚಂದ್ರ ರಾವ್ ಉದ್ಘಾಟಿಸಿದರು.

ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ “ವೀರ ಅಭಿಮನ್ಯು” & ಭಕ್ತ ಚಂದ್ರಹಾಸ” ಎನ್ನುವ ಕಥಾ ಪ್ರಸಂಗ ಪ್ರದರ್ಶನಗೊಂಡಿತು.

ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ವಾರ್ತಾಧಿಕಾರಿಗಳಾದ ಸಹನಾ ಎಮ್, ಲಕ್ಷ್ಮೀ ನರಸಿಂಹ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಪಿ.ಸಿ ಮುಕುಂದ ರಾವ್, ಕನ್ನಡ ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ಅಶೋಕ್ ಎನ್ ಚಲವಾದಿ ಸಂಸ್ಥೆಯ ಗುರುಗಳಾದ ಗೌರಿ ಕೆ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಪ್ಟೆಂಬರ್ 10 ರಂದು ನಡೆಯುವ ಬೆಳ್ಳಿ ಹಬ್ಬದ ಲೋಗೋ & ಬ್ಯಾನರ್ ಬಿಡುಗಡೆಗೊಳಿಸಲಾಯಿತು.

Exit mobile version