ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಜಡ್ಕಲ್ ಶಾಲೆಗೆ ಸುಣ್ಣ ಬಣ್ಣ, ವಿದ್ಯಾರ್ಥಿಗಳಿಗೆ ಸಮವಸ್ತ್ರ, ಆಟದ ಸಾಮಗ್ರಿಗಳು, ಪುಸ್ತಕ, ಅಂಗನವಾಡಿ ಮಕ್ಕಳಿಗೆ ಪುಸ್ತಕ, ಲೇಖನಿಗಳನ್ನು ವಿತರಿಸಲಾಯಿತು.
ಶಾಲೆಯ ಶಿಕ್ಷಕರ ಕೊರತೆ ನೀಗಿಸಲು ಖಾಸಗಿ ಶಿಕ್ಷಕರನ್ನು ನೇಮಕ ಮಾಡಿ ಅವರ ಒಂದು ವರ್ಷದಿಂದ ಸಂಬಳವನ್ನು ನೀಡುವ ಕಾರ್ಯವನ್ನೂ ಮಾಡಲಾಗುತ್ತಿದೆ.
ಸ್ವಯಂಸೇವಕರ ಸಹಾಯದಿಂದ ಶಾಲೆಗೆ ಸುಣ್ಣ ಬಣ್ಣ ಬಳಿದು, ಚಿತ್ರ ಬಿಡಿಸಿ, ಬಣ್ಣದಿಂದ ಅಲಂಕಾರಗೊಳಿಸಿದ್ದಲ್ಲದೇ, ಸ್ವಾತ್ರಂತ್ರ್ಯೋತ್ಸವದಂದು ಮಕ್ಕಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ಮತ್ತು ಸಿಹಿತಿಂಡಿಗಳನ್ನು ವಿತರಿಸಲಾಯಿತು.
ಈ ವೇಳೆ ಶಾಲಾ ಮುಖ್ಯೋಪಧ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು, ಪಂಚಾಯತ್ ಅಧ್ಯಕ್ಷರು, ಸ್ವಯಂಸ್ಪೂರ್ತಿ ಫೌಂಡೇಶನ್ ಪ್ರತಿನಿಧಿಗಳು ವಿದ್ಯಾರ್ಥಿಗಳು, ಪೋಷಕರು ಮತ್ತು ಊರವರು ಉಪಸ್ಥಿತರಿದ್ದರು.