Kundapra.com ಕುಂದಾಪ್ರ ಡಾಟ್ ಕಾಂ

ಕೆದೂರು ಗ್ರಾಮ ಪಂಚಾಯತ್: ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕೆದೂರು ಗ್ರಾಮ ಪಂಚಾಯತ್, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಭಿನಂದನಾ ಸಮಾರಂಭವು ಕೆದೂರು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೆದೂರು ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ಬಿಜೆಪಿ. ಮಂಡಲ ಅಧ್ಯಕ್ಷರಾದ ಶಂಕರ್ ಅಂಕದ ಕಟ್ಟೆ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ. ಬಿಜೆಪಿ. ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ, ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶರತ ಕುಮಾರ್ ಹೆಗ್ಡೆ ಶಾನಾಡಿ,ಕೋಟೇಶ್ವರ ವ್ಯ.ಸೇ.ಸ ಸಂಘದ ನಿರ್ದೇಶಕರಾದ ನವೀನ ಹೆಗ್ಡೆ ಶಾನಾಡಿ, ಕೆದೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಕೆ. ಭುಜಂಗ ಶೆಟ್ಟಿ ಹಾಗೂ ವಸಂತ ಶೆಟ್ಟಿ ಕೆದೂರು, ಮಾಜಿ ಎಪಿಎಂಸಿ ನಿರ್ದೇಶಕರು, ನೂತನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಉಪಾಧ್ಯಕ್ಷೆ ಜ್ಯೋತಿ ದೇವಾಡಿಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು ಮಾತನಾಡಿ, ನನ್ನ ಅಧಿಕಾರವಧಿಯಲ್ಲಿ ಎಲ್ಲರ ಸಹಕಾರದೊಂದಿಗೆ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು, ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಜನರ ಆಶೂತ್ತರಗಳಿಗೆ ಸ್ಪಂದಿಸಿ, ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಪಂಚಾಯತ್ ನ್ನು ಅಭಿವೃದ್ಧಿ ಪಥದತ್ತ ಕೊಂಡೋಯ್ಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದರು.

ಹಾಜರಿದ್ದ ಸಭಿಕರು ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ, ಶುಭ ಹಾರೈಸಿದರು. ಪ್ರತಾಪ್ ಶೆಟ್ಟಿ ಉಳ್ತೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Exit mobile version