Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯಲ್ಲಿ ಸಾರ್ವಜನಿಕ ಶ್ರೀ ಚಂಡಿಕಾಯಾಗ

ಗಂಗೊಳ್ಳಿ : ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಜರಗುವ 41ನೇ ವರ್ಷದ ಶ್ರೀ ಶಾರದಾ ಮಹೋತ್ಸವದಲ್ಲಿ ಮಂಗಳವಾರ ಶ್ರೀದೇವಿಯ ಪ್ರೀತ್ಯರ್ಥ ಹಾಗೂ ಲೋಕ ಕಲ್ಯಾಣಾರ್ಥ ಗ್ರಾಮಾಭಿವೃದ್ಧಿಗೋಸ್ಕರ ಸಾರ್ವಜನಿಕ ಶ್ರೀ ಚಂಡಿಕಾಯಾಗ ಜರಗಿತು.

ವೇದಮೂರ್ತಿ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ನೇತೃತ್ವದಲ್ಲಿ ಯಾಗದ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಸಮಿತಿಯ ಗೌರವಾಧ್ಯಕ್ಷ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಸಮಿತಿಯ ಅಧ್ಯಕ್ಷ ಸತೀಶ್ ಜಿ., ಕಾರ್ಯದರ್ಶಿ ಗೋಪಾಲ ಚಂದನ್, ಮಹಿಳಾ ಮಂಡಳಿಯ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶೀ ಜಯಂತಿ ಆರ್.ಖಾರ್ವಿ, ಸಮಿತಿಯ ಪದಾಧಿಕಾರಿಗಳು ಹಾಗೂ ಸೇವಾದಾರ ಕುಟುಂಬಸ್ಥರು ಉಪಸ್ಥಿತರಿದ್ದರು. ಊರಿನ ಹತ್ತು ಸಮಸ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

Exit mobile version