Kundapra.com ಕುಂದಾಪ್ರ ಡಾಟ್ ಕಾಂ

ಕಾಲ್ತೋಡು ಗ್ರಾಮ ಪಂಚಾಯತಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2022 – 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತ್ ಆಯ್ಕೆಯಾಗಿದ್ದು, ಅ.2ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗಾಂಧಿ ಜಯಂತಿ ದಿನ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಕಾಲ್ತೋಡು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಬಿ. ಅಣ್ಣಪ್ಪ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಪ್ರಶಸ್ತಿಯು ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಪಂಚಾಯತ್ ರಾಜ್‌ ಇಲಾಖೆಯ ಉಮಾಮದೇವನ್ ಮೊದಲಾದವರು ಉಪಸ್ಥಿತರಿದ್ದರು.

Exit mobile version