Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿ ತೇಜಸ್ವಿ ಮಿಥುನ್ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ ಕ್ವಿಜ್‌ಗೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್’ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ವಿಜೇತನಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆ ಆಗಿರುತ್ತಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version