Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕಾಲು ಜಾರಿ ಹೊಳೆಗೆ ಬಿದ್ದು ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೃಷಿ ಕೆಲಸ ಮುಗಿಸಿ ಸಂಜೆಯ ವೇಳೆ ಕೈಕಾಲು ತೊಳೆಯುವ ವೇಳೆ ಕಾಲು ಜಾರಿ ಹೊಳೆದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಬೇಳೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರಶಾಂತ ಆಚಾರ್ಯ (22) ಮೃತಪಟ್ಟ ದುರ್ದೈವಿ.

ಆಚಾರ್ಯ ಅವರು ತೋಟದ ಸಸಿ ಬುಡ ಮಾಡುವ ಕೆಲಸಕ್ಕಾಗಿ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಕೈಕಾಲು ತೊಳೆಯಲು ಕೊಮೆ ಹೊಳೆ ಆರ್ ಬೆಟ್ಟು ಗುಂಡಿ ಎಂಬಲ್ಲಿ ಇಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version