Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ದೋಣಿ ದುರಂತ: ಪರಿಹಾರಕ್ಕೆ ಸಂಸದ, ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಅವರೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೋಮವಾರ ಗಂಗೊಳ್ಳಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಹಾನಿಯಾದ ಬೋಟುಗಳ ಮಾಲಿಕರಿಗೆ ಪರಿಹಾರ ಒದಗಿಸಿಕೊಡುವಂತೆ ಮನವಿ ಮಾಡಿದರು.

ಗಂಗೊಳ್ಳಿ ದೋಣಿ ದುರಂತದಲ್ಲಿ 8 ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿ, 2 ಡಿಂಗಿ ಹಾಗೂ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈ ಅವಘಡದಿಂದ ಮೀನುಗಾರರು ಆಘಾತಗೊಂಡಿದ್ದಾರೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿದ್ದಾರೆ.

ಆದ್ದರಿಂದ ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ದೋಣಿಗಳಿಗೆ ರೂ.10 ಕೋಟಿ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.

Exit mobile version