Kundapra.com ಕುಂದಾಪ್ರ ಡಾಟ್ ಕಾಂ

ಅಯೋಧ್ಯೆ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಶಾಸಕರಿಂದ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ ಸಂಕಲ್ಪ ಹೊಂದಲಾಗಿದೆ.

ಈ ಸಂಕಲ್ಪದಂತೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಶಿರೂರಿನ ಆಲಂದೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ, ಆಲಂದೂರು ಭಾಗದ ಮನೆ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.

Exit mobile version