Kundapra.com ಕುಂದಾಪ್ರ ಡಾಟ್ ಕಾಂ

ಪಿಯುಸಿ ವಿದ್ಯಾರ್ಥಿಗೆ ಪ್ರೋತ್ಸಾಹಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪ್ರಥಮ ಪಿ.ಯು.ಸಿ.ವ್ಯಾಸಾಂಗ ಮಾಡುತ್ತಿರುವ ತಾಲೂಕಿನ ಕೊಡ್ಲಾಡಿಯ ಶಶಾಂಕ್’ಗೆ ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್‌’ನ ಅಧ್ಯಕ್ಷರು ಹಾಗೂ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ 25,000 ರೂಪಾಯಿಗಳ ಚೆಕ್ ಹಸ್ತಾಂತರಿಸಿದರು.

ಆರ್ಥಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿಯಾದ ಶಶಾಂಕ್ ಪಿಯುಸಿ ವ್ಯಾಸಂಗದ ಕುರಿತು ಶುಭಹಾರೈಸಿದರು. ಈ ವೇಳೆ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Exit mobile version