ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಧಾರ್ಮಿಕ ಆಚರಣೆಗಳು ಶ್ರೇಯಸ್ಸು ನೀಡುವ ಜೊತೆಗೆ ಬದುಕಿಗೆ ನೆಮ್ಮದಿಯ ಸಂತೃಪ್ತಿ ನೀಡುತ್ತದೆ. ದೂರದೃಷ್ಟಿತ್ವದ ಕನಸಿನೊಂದಿಗೆ ಸಾವಿರಾರು ಕುಟುಂಬಗಳಿಗೆ ಧ.ಗ್ರಾ.ಯೋಜನೆ ಸ್ವಾವಲಂಬನೆಯ ಬದುಕು ನೀಡಿದೆ. ಸಾಮೂಹಿಕ ಸತ್ಯನಾರಾಯಣ ಪೂಜೆ ಮೂಲಕ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಕುಟುಂಬಗಳ ಜೊತೆಗೆ ಸಮಾಜಕ್ಕೂ ಕೂಡ ಒಳಿತು ನೀಡಲಿ ಎನ್ನುವುದು ಕಾವಂದರ ಆಶಯ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ಲೇಖಕ ಬಿ. ಚಂದ್ರಶೇಖರ ನಾವಡ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂದೂರು, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಂದೂರು ವಲಯ ಇದರ ವತಿಯಿಂದ ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧ.ಗ್ರಾ.ಯೋಜನೆಯ ಕೇಂದ್ರ ಸಮಿತಿ ಅಧ್ಯಕ್ಷ ಶಿರೂರು ವಾಸು ಮೇಸ್ತ ಅಧ್ಯಕ್ಷತೆವಹಿಸಿದ್ದರು. ಹಿರಿಯ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ ಪಿ. ಆಚಾರ್ಯ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಘುರಾಮ ಕೆ. ಪೂಜಾರಿ, ಜಿಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ, ಬಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ, ಬಂದೂರು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ, ಎನ್ಐಎಸ್ಟಿ ಉಡುಪಿ ಪ್ರಾಂಶುಪಾಲ ಉಲ್ಲಾಸ ಮೇಸ್ತ ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ಕೆ. ವಿನಾಯಕ ಪೈ ಪ್ರಾಸ್ತಾವಿಸಿದರು. ಬಂದೂರು ವಲಯ ಮೇಲ್ವಿಚಾರಕ ರಾಮ ಎನ್. ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಜು ನಿರೂಪಿಸಿದರು. ಸೇವಾಪ್ರತಿನಿಧಿ ರೇವತಿ ವಂದಿಸಿದರು.

