Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಕಲಾ ಪ್ರೋತ್ಸಾಹಕ ಕರುಣಾಕರ ಪೈ ಹೆಮ್ಮಾಡಿ, ನಿವೃತ್ತ ಹಿರಿಯ  ಶಿಕ್ಷಕಿ ಶ್ರೀಮತಿ ಸೆವರಿನ್ ಮೆಂಡೋನ್ಸಾ ಅವರನ್ನು ಸನ್ಮಾನಿಸಿದರು.
ಮುಖ್ಯ ಅತಿಥಿಯಾಗಿ ಉದ್ಯಮಿ ಸದಾನಂದ ಸೇರುಗಾರ್ ಉಪ್ಪಿನಕುದ್ರು, ಗೊಂಬೆಯಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಯು.ವಾಮನ್ ಪೈ, ಕಲಾವಿದ ಮಂಜುನಾಥ ಮೈಪಾಡಿ ಉಪಸ್ಥಿತರಿದ್ದರು. ಅನಂತರ ಶ್ರೀ ದುರ್ಗಾಪರಮೇಶ್ವರಿ ಬಾಲಕಿಯರ ಯಕ್ಷಗಾನ ತಂಡ, ಹೆಮ್ಮಾಡಿ ಇವರಿಂದ ಮಧುರ ಮಹೇಂದ್ರ ಯಕ್ಷಗಾನ ಬಯಲಾಟ ಕಿಕ್ಕಿರಿದು ಸೇರಿದ ಪ್ರೇಕ್ಷಕರನ್ನು ರಂಜಿಸಿತು. ನಾಗೇಶ್ ಶ್ಯಾನುಭಾಗ್  ಕಾರ್ಯಕ್ರಮ ನಿರೂಪಿಸಿದರು.

Exit mobile version