Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಎಸ್‌ಎಲ್‌ಸಿಯಲ್ಲಿ ಬೈಂದೂರು ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕುಂದಾಪ್ರ ಡಾ ಕಾಂ ಸುದ್ದಿ
ಬೈಂದೂರು:
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರಿನ ರತ್ತೂಬಾಯಿ ಜನತಾ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳು ಪೈಕಿ, 43 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶ್ರೇಯ 596 ಅಂಕಗಳಿಸಿ ಶಾಲೆಗೆ ಪ್ರಥಮ, ನಿಹಾಲ್ 589 ಅಂಕದೊಂದಿಗೆ ದ್ವೀತಿಯ ಹಾಗೂ ರಾಘವೇಂದ್ರ 577 ತೃತೀಯ ಅಂಕ ಗಳಿಸಿದ್ದಾರೆ.

ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೆಮ್ಮಾಡಿ ಶ್ರೀ ವಿವಿವಿ ಮಂಡಳಿ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಹಾಗೂ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ , ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.

Exit mobile version