ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭ ಇತ್ತಿಚಿಗೆ ಜರುಗಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾದ ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಪ್ರವಿತಾ ಅಶೋಕ್, ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತç ಉಪನ್ಯಾಸಕ ಪ್ರಭಾಕರ್ ಶೆಟ್ಟಿಗಾರ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದರಿದ್ದರು.
ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಉಪನ್ಯಾಸಕಿ ದೀಪಿಕಾ ಜಿ. ಉಪಸ್ಥಿತರಿದ್ದರು.
ಅತ್ಯುತ್ತಮ ನಿರೂಪಣೆ ಶೃದ್ಧಾ, ದ್ವಿತೀಯ ಬಿಬಿಎ, ಅತ್ಯುತ್ತಮ ಗುಂಪು ನೃತ್ಯ ಬಹುಮಾನ ದ್ವಿತೀಯ ಬಿಸಿಎ (ಬಿ), ವೈಯಕ್ತಿಕ ಪ್ರತಿಭೆ – ಬ್ರಾಹ್ಮಿ ಪ್ರಥಮ ಬಿಸಿಎ (ಎ), ಒಟ್ಟು ಸಮಗ್ರ ಪುರಸ್ಕಾರವನ್ನು ಕ್ರಮವಾಗಿ ತೃತೀಯ ಬಿ.ಕಾಂ. (ಬಿ), ತೃತೀಯ ಬಿ.ಕಾಂ. (ಸಿ), ದ್ವಿತೀಯ ಬಿಸಿಎ (ಎ), ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದರು.
ಕಾಲೇಜಿನ ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಬಹುಮಾನಿತರ ಪಟ್ಟಿ ವಾಚಿಸಿದರು. ಇಂಗ್ಲೀಷ್ ಉಪನ್ಯಾಸಕಿ ಸ್ವಾತಿ ರಾವ್ ವಂದಿಸಿ, ವಾಣಿಜ್ಯ ಉಪನ್ಯಾಸಕಿ ದೀಪಾ ಪೂಜಾರಿ ನಿರೂಪಿಸಿದರು.