Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಯುವ ಬಂಟರ ಸಂಘ: ಗೃಹ ಚೇತನ ಯೋಜನೆಯಡಿ  ಆರ್ಥಿಕ ನೆರವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೃಹ ಚೇತನ ಯೋಜನೆಯಡಿ ಆಯ್ಕೆಯಾದ ಕುಟುಂಬಗಳಿಗೆ ಇತ್ತಿಚಿಗೆ ಸಂಘದ ಕಛೇರಿಯಲ್ಲಿ ಚೆಕ್ ವಿತರಣೆ ಮಾಡಲಾಯಿತು.

ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿ ಎಚ್. ಚಂದ್ರ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ ಕುಸುಮ ಶೆಟ್ಟಿ ಅವರಿಗೆ ಸಂಘದ ದಶಮ ಸಂಭ್ರಮದ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ  ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಘದ ವತಿಯಿಂದ 30,000 ರೂಪಾಯಿ ಹಣವನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ, ದಶಮ ಸಂಭ್ರಮದ ಮಹಾ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ ಹೆಚ್. ಚಂದ್ರ ಶೆಟ್ಟಿ, ಪೋಷಕರಾದ ಅಲ್ತಾರು ಸುಧಾಕರ ಶೆಟ್ಟಿ, ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ  ನಿತೀಶ್  ಶೆಟ್ಟಿ ಬಸ್ರೂರು ಉಪಸ್ಥಿತರಿದ್ದರು.

Exit mobile version