Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಸದಾಶಿವಗೆ ಬೀಳ್ಕೊಡುಗೆ

ಗಂಗೊಳ್ಳಿ : ನಿವೃತ್ತಿ ಎನ್ನುವುದು ಪ್ರತಿ ಉದ್ಯೋಗಸ್ಥರ ಜೀವನದ ಸಹಜ ತಿರುವು. ದುಖಃ ಸಂತೋಷಗಳೆರಡೂ ಸಹಜ. ಅವೆಲ್ಲಕ್ಕಿಂತ ಹೆಚ್ಚಾಗಿ ಒಬ್ಬರ ನಿವೃತ್ತಿ ಮೊದಲಿನ ಬದುಕು ಇಡೀ ಸಂಸ್ಥೆ ಮತ್ತು ಸಮಾಜ ಹಮ್ಮೆಪಡುವಂತಿದ್ದರೆ ಅದು ನಿಜವಾದ ಸಾಧನೆ ಎಂದು ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಅಧ್ಯಕ್ಷರಾದ ಡಾ.ಕಾಶೀನಾಥ ಪೈ ಅಭಿಪ್ರಾಯಪಟ್ಟರು.

ಅವರು ಇಲ್ಲಿಯ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸತತ ನಲವತ್ತೊಂದು ವರುಷಗಳ ಕಾಲ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಿ.ಸದಾಶಿವ ಗಾಣಿಗರನ್ನು ಬೀಳ್ಗೊಡುವ ಸಮಾರಂಭದಲಿ ಅದ್ಯಕ್ಷತೆ ವಹಿಸಿ ಅವರನ್ನು ಅಭಿನಂದಿಸಿ ಮಾತನಾಡಿದರು.

ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಕಾರ‍್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯದ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್, ಕಾಲೇಜಿನ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ,ಆಂಗ್ಲ ಮಾಧ್ಯಮ ಫ್ರೌಢಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್, ಆಡಳಿತ ಮಂಡಳಿಯ ಸದಸ್ಯ ಅಶ್ವಿನ್ ನಾಯಕ್, ಕಛೇರಿ ಸಿಬ್ಬಂದಿ ವರ್ಗದವರು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಕಛೇರಿ ಯ ನಿಕಟವರ್ತಿ ಭಾಸ್ಕರ್ ಹೆಚ್ ಜಿ,ಶ್ರೀಧರ ಗಾಣಿಗ, ದೈಹಿಕ ಶಿಕ್ಷಕ ಸದಾನಂದ ವೈದ್ಯ, ಉಪನ್ಯಾಸಕಿ ಕವಿತಾ ಎಮ್ ಸಿ ಉಪನ್ಯಾಸಕ ಭಾಸ್ಕರ ಶೆಟ್ಟಿ, ಸದಾಶಿವ ಗಾಣಿಗರನ್ನು ಅಭಿನಂದಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಮಸ್ತ ಕಾಲೇಜಿನ ಬಳಗದ ಪರವಾಗಿ ಸದಾಶಿವ ಗಾಣಿಗರನ್ನು ಸನ್ಮಾನಿಸಲಾಯಿತು. ಕನ್ನಡ ಮಾಧ್ಯಮ ಫ್ರೌಢ ಶಾಲೆಯ ಉಪ ಪ್ರಾಂಶುಪಾಲ ವಾಮನದಾಸ ಭಟ್ ಅವರು ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಥಾಮಸ್ ಕೆ.ಪಿ. ಕಾರ‍್ಯಕ್ರಮ ನಿರ್ವಹಿಸಿದರು.

ವರದಿ: ನರೇಂದ್ರ ಎಸ್ ಗಂಗೊಳ್ಳಿ.

Exit mobile version