Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 96ನೇ ತಿಂಗಳ ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 96ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

ವೇದಿಕೆಯಲ್ಲಿ ಸದಾನಂದ ಕುಂದಾಪುರ, ಗಣೇಶ್ ಪೂಜಾರಿ ಗಂಗೊಳ್ಳಿ, ಮಾಲತಿ ಗಣೇಶ್ ಪೂಜಾರಿ, ಶ್ರೀಧರ್ ನಾಯಕ್ ಗುಡ್ಡೆಯಂಗಡಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು.

ಅಕಾಡೆಮಿಯ ವತಿಯಿಂದ ಉದಯೋನ್ಮುಖ ಕೊಳಲು ವಾದಕ ಶಾಮ್ ಜಿ.ಎನ್. ಪೂಜಾರಿ, ಗಂಗೊಳ್ಳಿ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2023-24ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಪೂಜಾರಿಯವರನ್ನು ಗೌರವಿಸಲಾಯಿತು. ನಂತರ ಬಾಲ ಪ್ರತಿಭೆ ಶಾಮ್ ಜಿ.ಎನ್. ಪೂಜಾರಿಯವರು ನಡೆಸಿಕೊಟ್ಟ ಕೊಳಲು ವಾದನ ಕಛೇರಿ ನೆರೆದ ಪ್ರೇಕ್ಷಕರನ್ನು ದಿಗ್ಭ್ರಮೆಗೊಳಿಸಿತು.

ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದರು.

Exit mobile version