Kundapra.com ಕುಂದಾಪ್ರ ಡಾಟ್ ಕಾಂ

ಗ್ರಾಮ ಪಂಚಾಯಿತಿನ ಸಮಸ್ಯೆಗಳ  ಶೀಘ್ರ ಪರಿಹಾರಕ್ಕಾಗಿ ಕುಂದಾಪುರ ಶಾಸಕರಿಂದ ಜಿ.ಪಂ. ಸಿಇಓ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಈ ಬಗ್ಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಪ್ರತಿಕಿಯಿಸಿ, ಸಮಸ್ಯೆ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾ,ಪಂ ಕಾರ್ಯನಿರ್ವಹಣಾಧಿಕಾರಿ, ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ  ಕುಂದಾಪುರ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರೂರು ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ತಿಳಿಸಿದರು.

Exit mobile version