Site icon Kundapra.com ಕುಂದಾಪ್ರ ಡಾಟ್ ಕಾಂ

ಗುಜ್ಜಾಡಿ: ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ. ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಅಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ಚಂದ್ರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಜಾದ್ ಅಹಮದ್  ಹಾಗೂ ಮಂಜುನಾಥ್ ಶೆಟ್ಟಿ ಕಾರ್ಯನಿರ್ವಹಿಸಿದರು.

ಮುಖ್ಯ ಅತಿಥಿಯಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ  ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿರುವ ರವಿಶಂಕರ್ ಹೆಗ್ಡೆ, ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್, ರಾಜು ಎಸ್ ಮಯ್ಯಾಡಿ   ಇನ್ನಿತರರು ಉಪಸ್ಥಿತರಿದ್ದರು. 

ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಸಂಘದ ಅಧ್ಯಕ್ಷರಾಗಿರುವ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಗುರುರಾಜ್ ಪೂಜಾರಿ ವಂದಿಸಿದರು.

Exit mobile version