Kundapra.com ಕುಂದಾಪ್ರ ಡಾಟ್ ಕಾಂ

ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಸಂಸದರಿಂದ ಕೇಂದ್ರ ಸಚಿವರಿಗೆ ಮನವಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಿವಮೊಗ್ಗ ಲೋಕಸಭಾ ಸದಸ್ಯರಾದ  ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ  ನಿತಿನ್ ಜೈರಾಂ ಗಡ್ಕರಿ ಅವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದ್ದಾರೆ.

1) ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ

2) ಕುಂದಾಪರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ

3) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ

4) ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಬಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ

5) ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ

ಮನವಿವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿರುತ್ತಾರೆ.

ಕ್ಷೇತ್ರದ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ತಮ್ಮ ಬೆಂಬಲ ನೀಡುತ್ತಿರುವ ಮಾನ್ಯ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ  ನಿತಿನ್ ಜೈರಾಂ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.

Exit mobile version