Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ಬಹುಭಾಷಾ ನಟ ಅರ್ಜುನ್ ಸರ್ಜಾ ಭೇಟಿ

ಕೊಲ್ಲೂರು: ಬಹು ಭಾಷಾನಟ ಕನ್ನಡದ ಅರ್ಜುನ್ ಸರ್ಜಾ ಇಂದು ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರ್ಜುನ್ ಸರ್ಜಾ ತಮ್ಮ ಪತ್ನಿ ನಿವೇದಿತಾ ಅರ್ಜುನ್, ಹಿರಿಯ ಪುತ್ರಿ ಐಶ್ವರ್ಯ ಅತ್ತೆ ಗೀತಾರೊಂದಿಗೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಅನ್ನಪ್ರಸಾದವನ್ನು ಸ್ವೀಕರಿಸಿದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕ್ರಷ್ಣಪ್ರಸಾದ ಅಡ್ಯಂತಾಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ.ಆರ್. ಉಮಾ ಮೊದಲಾದವರು ಉಪಸ್ಥಿತರಿದ್ದು ಅರ್ಜುನ್ ಸರ್ಜಾ ದಂಪತಿಗಳನ್ನು ಹಾಗೂ ಕುಟುಂಬಿಕರನ್ನು ಬರಮಾಡಿಕೊಂಡರು.

ಬಾಲನಟನಾಗಿ ಕನ್ನಡದ ಚಿತ್ರರಂಗ ಪ್ರವೇಶಿಸಿದ ಅರ್ಜುನ್ ಸರ್ಜಾ ಅವರಿಗೆ ಮಂದೆ ತಮಿಳು ಚಿತ್ರರಂಗ ಅವಕಾಶದ ಬಾಗಿಲು ತೆರೆದಿತ್ತು. ಶಿವರಾಜಕುಮಾರ್ ಅವರೊಂದಿಗೆ ನಟಿಸಿದ್ದ ನಿವೇದಿತಾ ಮದುವೆಯ ಬಳಿಕ ನಟನೆಯಿಂದ ದೂರವೇ ಉಳಿದಿದ್ದರು. ಈಗ ಇವರ ಪುತ್ರಿ ಐಶ್ವರ್ಯ ಇತ್ತಿಚಿಗೆ ಕಾಲಿವುಡ್ ಮೂಲಕ ಸಿನೆಮಾ ಜಗತ್ತಿಗೆ ಪ್ರವೇಶಿಸಿದ್ದಳು.

Exit mobile version