Kundapra.com ಕುಂದಾಪ್ರ ಡಾಟ್ ಕಾಂ

ನಿರಂತರ ಮಳೆ ಹಿನ್ನೆಲೆ: ಜುಲೈ 6ರಂದು ಉಡುಪಿ ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.5:
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ಮೊದಲು ಕುಂದಾಪುರ ಎಸಿ ಅವರು ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿಗೆ ಮಾತ್ರ ರಜೆ ಘೋಷಿಸಿದ್ದರು. ಅಧಿಕ ಮಳೆಯಾಗುತ್ತಿರುವುದರಿಂದ ಅಂತಿಮವಾಗಿ ಜಿಲ್ಲೆಯ ಪಿಯು ತನಕದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Exit mobile version