Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಸರ್ಕಾರದ ಬೈಂದೂರು ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ.

ಕೆಡಿಪಿ ಸದಸ್ಯರನ್ನಾಗಿ ಸತೀಶ್‌ ಕುಮಾರ್‌ ಶೆಟ್ಟಿ ಹೇರೂರು, ಶೇಖರ್‌ ಪೂಜಾರಿ ಉಪ್ಪುಂದ, ನರಸಿಂಹ ಹಳಗೇರಿ, ಜಗದೀಶ್‌ ದೇವಾಡಿಗ ಬಿಜೂರು, ಮೌಲಾನ ದಸ್ತಗೀರಿ ಸಾಹೇಬ್‌ ಶಿರೂರು ಹಾಗೂ ಗ್ರೀಷ್ಮಾ ಭಿಡೆ ಕೊಲ್ಲೂರು ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

Exit mobile version